ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.
ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.
ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…