ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.
ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.
ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…