ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…