ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…