ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…