ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…