ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…