ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…