Advertisement
ಜಿಲ್ಲೆ

ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

Share

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

Advertisement
Advertisement
Advertisement
Advertisement

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

Advertisement

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

8 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

12 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

13 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

13 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago