Advertisement
ಜಿಲ್ಲೆ

ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

Share

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

6 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

10 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago