Advertisement
ಜಿಲ್ಲೆ

ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

Share

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

3 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

3 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

3 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

12 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

12 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

14 hours ago