Advertisement
ಜಿಲ್ಲೆ

ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

Share

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

6 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

9 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

10 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

11 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

23 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago