Advertisement
ಜಿಲ್ಲೆ

ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

Share

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

Advertisement

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

6 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

12 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

23 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

23 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago