Advertisement
ಜಿಲ್ಲೆ

ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

Share

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago