ಮಡಿಕೇರಿ :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.
ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.
ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…