ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.
ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.
ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…