ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.
ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.
ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…