Advertisement
ಸುದ್ದಿಗಳು

ಕೊಡಗಿನಲ್ಲಿ ಮಳೆ ಬಂದರೂ ಕೃಷಿಗೆ ಸಾಲುತ್ತಿಲ್ಲ : ರೈತಾಪಿ ವರ್ಗದಲ್ಲಿ ಆತಂಕ

Share

ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.

Advertisement
Advertisement

ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.

Advertisement

ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು  ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

13 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

18 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

18 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

18 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

18 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

18 hours ago