ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.
ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.
ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…