ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.
ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.
ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…