ಸಾಂಸ್ಕೃತಿಕ

ಕೊಡಗಿನಲ್ಲಿ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ : ಸುಂಟಿಕೊಪ್ಪ ಸಮೀಪದ ನಾಕೂರು ಬಳಿಯ ಹೋಂಸ್ಟೇಯೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ ನೆರವೇರಿತು.
ರವಿಚಂದ್ರನ್, ಶ್ರೀನಿವಾಸ್ ಪ್ರಭು, ಮೋನಿಷಾ, ಯತಿರಾಜ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ ವಿವಿದೆಡೆ ನಡೆಯಲಿದೆ.
ಸುದ್ದಿಗಾರರೊಂದಿಗೆ ನಟ ರವಿಚಂದ್ರನ್ ಮಾತನಾಡಿ, ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ. ಹೊಸಬರ ತಂಡದೊಂದಿಗೆ ಕೆಲಸ ಮಾಡುತ್ತಿರುವುದು ಸಂತಸ ತರಿಸಿದೆ. ಕೊಡಗಿನಲ್ಲಿ ಈ ಹಿಂದೆ ದೃಶ್ಯ ಚಿತ್ರದ ಚಿತ್ರೀಕರಣ ಮಾಡಿದ್ದು ನೆನಪಾಗುತ್ತಿದೆ. ಮಳೆ, ಪ್ರಕೃತಿಯಂದರೆ ನನಗಿಷ್ಟ. ಸಿನಿಮಾದ ಕಥೆ ಕೂಡ ಇದನ್ನೇ ಬಯಸಿದೆ. ಈ ನಿಟ್ಟಿನಲ್ಲಿ ಇಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ. ಚಿತ್ರದ ಚಿತ್ರೀಕರಣ ಶೇ. 90ರಷ್ಟು ಭಾಗ ಕೊಡಗಿನಲ್ಲಿರಲಿದೆ. ಇದು ರಿಮೇಕ್ ಸಿನಿಮಾವಾಗಿದ್ದು ಕನ್ನಡ ಸೊಗಡಿರಲಿದೆ ಎಂದರು.
ನಿರ್ದೇಶಕ ಅಜಿತ್ ಸರ್ಕಾರ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ ನಾನೇ ಬಂಡವಾಳ ಕೂಡ ಹೂಡಿದ್ದೇನೆ. ವಿಭಿನ್ನ ಕಥಾ ಹಂದರ ಹೊಂದಿದ್ದು ಸಸ್ಪೆನ್ಸ್ ಕಥೆಯಾಗಿದೆ. ಕಥೆಯ ಸುಳಿವನ್ನು ಊಹಿಸಲು ಅಸಾಧ್ಯ. ಅಷ್ಟೊಂದು ತಿರುವು ಚಿತ್ರಕಥೆಯಲ್ಲಿದ್ದು ಪ್ರೇಕ್ಷಕನನ್ನು ಸೆಳೆಯಲಿದೆ. ಜತೆಗೆ ಸಮಾಜಕ್ಕೆ ಸಂದೇಶ ಕೂಡ ಇದೆ ಎಂದು ಮಾಹಿತಿ ನೀಡಿದರು.
ಛಾಯಗ್ರಾಹಕ ಪಿಆರ್‍ಕೆ ದಾಸ್ ಮಾತನಾಡಿ, ಮಳೆಯಲ್ಲಿ ಚಿತ್ರೀಕರಣ ಮಾಡುವುದು ಸಹಾಸದ ಜತೆಗೆ ಕ್ರಿಯಾಶೀಲಾ ಕೆಲಸ. ಕನ್ನಡ ಹಲವು ಸಿನಿಮಾದ ಕೆಲಸವನ್ನು ನಾನು ಮಳೆಯಲ್ಲಿ ಮಾಡಿದ್ದು ಇದು ಹೊಸದಲ್ಲ. ಸಿನಿಮಾ ಕಥೆ ಸುಂದರವಾಗಿದ್ದು ಸಿನಿಮಾ ಅಚ್ಚುಕಟ್ಟಾಗಿ ಮೂಡಿಬರಲಿದೆ ಎಂದರು.
ಚಿತ್ರದಲ್ಲಿ 5 ಹಾಡುಗಳಿದ್ದು, ಯೋಗರಾಜ್ ಭಟ್ ಸೇರಿದಂತೆ ಇನ್ನಿತರರು ಸಾಹಿತ್ಯ ಬರೆಯಲಿದ್ದಾರೆ. ಸಂಗೀತ ನಿರ್ದೇಶನ ಇನ್ನೂ ಅಂತಿಮಗೊಂಡಿಲ್ಲ. ದೃಶ್ಯ ಚಿತ್ರದಂತೆ ಇದು ವಿಭಿನ್ನವಾಗಲಿದ್ದು ರವಿಚಂದ್ರನ್ ವೃತ್ತಿ ಬದುಕಿನ ಉತ್ತಮ ಚಿತ್ರವಾಗಿರಲಿದೆ ಎಂದರು.

Advertisement
Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

16 minutes ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

24 minutes ago

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ…

2 hours ago

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

7 hours ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

9 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

13 hours ago