Advertisement
ಸಾಂಸ್ಕೃತಿಕ

ಕೊಡಗಿನಲ್ಲಿ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ

Share

ಮಡಿಕೇರಿ : ಸುಂಟಿಕೊಪ್ಪ ಸಮೀಪದ ನಾಕೂರು ಬಳಿಯ ಹೋಂಸ್ಟೇಯೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ ನೆರವೇರಿತು.
ರವಿಚಂದ್ರನ್, ಶ್ರೀನಿವಾಸ್ ಪ್ರಭು, ಮೋನಿಷಾ, ಯತಿರಾಜ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ ವಿವಿದೆಡೆ ನಡೆಯಲಿದೆ.
ಸುದ್ದಿಗಾರರೊಂದಿಗೆ ನಟ ರವಿಚಂದ್ರನ್ ಮಾತನಾಡಿ, ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ. ಹೊಸಬರ ತಂಡದೊಂದಿಗೆ ಕೆಲಸ ಮಾಡುತ್ತಿರುವುದು ಸಂತಸ ತರಿಸಿದೆ. ಕೊಡಗಿನಲ್ಲಿ ಈ ಹಿಂದೆ ದೃಶ್ಯ ಚಿತ್ರದ ಚಿತ್ರೀಕರಣ ಮಾಡಿದ್ದು ನೆನಪಾಗುತ್ತಿದೆ. ಮಳೆ, ಪ್ರಕೃತಿಯಂದರೆ ನನಗಿಷ್ಟ. ಸಿನಿಮಾದ ಕಥೆ ಕೂಡ ಇದನ್ನೇ ಬಯಸಿದೆ. ಈ ನಿಟ್ಟಿನಲ್ಲಿ ಇಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ. ಚಿತ್ರದ ಚಿತ್ರೀಕರಣ ಶೇ. 90ರಷ್ಟು ಭಾಗ ಕೊಡಗಿನಲ್ಲಿರಲಿದೆ. ಇದು ರಿಮೇಕ್ ಸಿನಿಮಾವಾಗಿದ್ದು ಕನ್ನಡ ಸೊಗಡಿರಲಿದೆ ಎಂದರು.
ನಿರ್ದೇಶಕ ಅಜಿತ್ ಸರ್ಕಾರ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ ನಾನೇ ಬಂಡವಾಳ ಕೂಡ ಹೂಡಿದ್ದೇನೆ. ವಿಭಿನ್ನ ಕಥಾ ಹಂದರ ಹೊಂದಿದ್ದು ಸಸ್ಪೆನ್ಸ್ ಕಥೆಯಾಗಿದೆ. ಕಥೆಯ ಸುಳಿವನ್ನು ಊಹಿಸಲು ಅಸಾಧ್ಯ. ಅಷ್ಟೊಂದು ತಿರುವು ಚಿತ್ರಕಥೆಯಲ್ಲಿದ್ದು ಪ್ರೇಕ್ಷಕನನ್ನು ಸೆಳೆಯಲಿದೆ. ಜತೆಗೆ ಸಮಾಜಕ್ಕೆ ಸಂದೇಶ ಕೂಡ ಇದೆ ಎಂದು ಮಾಹಿತಿ ನೀಡಿದರು.
ಛಾಯಗ್ರಾಹಕ ಪಿಆರ್‍ಕೆ ದಾಸ್ ಮಾತನಾಡಿ, ಮಳೆಯಲ್ಲಿ ಚಿತ್ರೀಕರಣ ಮಾಡುವುದು ಸಹಾಸದ ಜತೆಗೆ ಕ್ರಿಯಾಶೀಲಾ ಕೆಲಸ. ಕನ್ನಡ ಹಲವು ಸಿನಿಮಾದ ಕೆಲಸವನ್ನು ನಾನು ಮಳೆಯಲ್ಲಿ ಮಾಡಿದ್ದು ಇದು ಹೊಸದಲ್ಲ. ಸಿನಿಮಾ ಕಥೆ ಸುಂದರವಾಗಿದ್ದು ಸಿನಿಮಾ ಅಚ್ಚುಕಟ್ಟಾಗಿ ಮೂಡಿಬರಲಿದೆ ಎಂದರು.
ಚಿತ್ರದಲ್ಲಿ 5 ಹಾಡುಗಳಿದ್ದು, ಯೋಗರಾಜ್ ಭಟ್ ಸೇರಿದಂತೆ ಇನ್ನಿತರರು ಸಾಹಿತ್ಯ ಬರೆಯಲಿದ್ದಾರೆ. ಸಂಗೀತ ನಿರ್ದೇಶನ ಇನ್ನೂ ಅಂತಿಮಗೊಂಡಿಲ್ಲ. ದೃಶ್ಯ ಚಿತ್ರದಂತೆ ಇದು ವಿಭಿನ್ನವಾಗಲಿದ್ದು ರವಿಚಂದ್ರನ್ ವೃತ್ತಿ ಬದುಕಿನ ಉತ್ತಮ ಚಿತ್ರವಾಗಿರಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago