Advertisement
ಸಾಂಸ್ಕೃತಿಕ

ಕೊಡಗಿನಲ್ಲಿ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ

Share

ಮಡಿಕೇರಿ : ಸುಂಟಿಕೊಪ್ಪ ಸಮೀಪದ ನಾಕೂರು ಬಳಿಯ ಹೋಂಸ್ಟೇಯೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ ನೆರವೇರಿತು.
ರವಿಚಂದ್ರನ್, ಶ್ರೀನಿವಾಸ್ ಪ್ರಭು, ಮೋನಿಷಾ, ಯತಿರಾಜ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ ವಿವಿದೆಡೆ ನಡೆಯಲಿದೆ.
ಸುದ್ದಿಗಾರರೊಂದಿಗೆ ನಟ ರವಿಚಂದ್ರನ್ ಮಾತನಾಡಿ, ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ. ಹೊಸಬರ ತಂಡದೊಂದಿಗೆ ಕೆಲಸ ಮಾಡುತ್ತಿರುವುದು ಸಂತಸ ತರಿಸಿದೆ. ಕೊಡಗಿನಲ್ಲಿ ಈ ಹಿಂದೆ ದೃಶ್ಯ ಚಿತ್ರದ ಚಿತ್ರೀಕರಣ ಮಾಡಿದ್ದು ನೆನಪಾಗುತ್ತಿದೆ. ಮಳೆ, ಪ್ರಕೃತಿಯಂದರೆ ನನಗಿಷ್ಟ. ಸಿನಿಮಾದ ಕಥೆ ಕೂಡ ಇದನ್ನೇ ಬಯಸಿದೆ. ಈ ನಿಟ್ಟಿನಲ್ಲಿ ಇಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ. ಚಿತ್ರದ ಚಿತ್ರೀಕರಣ ಶೇ. 90ರಷ್ಟು ಭಾಗ ಕೊಡಗಿನಲ್ಲಿರಲಿದೆ. ಇದು ರಿಮೇಕ್ ಸಿನಿಮಾವಾಗಿದ್ದು ಕನ್ನಡ ಸೊಗಡಿರಲಿದೆ ಎಂದರು.
ನಿರ್ದೇಶಕ ಅಜಿತ್ ಸರ್ಕಾರ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ ನಾನೇ ಬಂಡವಾಳ ಕೂಡ ಹೂಡಿದ್ದೇನೆ. ವಿಭಿನ್ನ ಕಥಾ ಹಂದರ ಹೊಂದಿದ್ದು ಸಸ್ಪೆನ್ಸ್ ಕಥೆಯಾಗಿದೆ. ಕಥೆಯ ಸುಳಿವನ್ನು ಊಹಿಸಲು ಅಸಾಧ್ಯ. ಅಷ್ಟೊಂದು ತಿರುವು ಚಿತ್ರಕಥೆಯಲ್ಲಿದ್ದು ಪ್ರೇಕ್ಷಕನನ್ನು ಸೆಳೆಯಲಿದೆ. ಜತೆಗೆ ಸಮಾಜಕ್ಕೆ ಸಂದೇಶ ಕೂಡ ಇದೆ ಎಂದು ಮಾಹಿತಿ ನೀಡಿದರು.
ಛಾಯಗ್ರಾಹಕ ಪಿಆರ್‍ಕೆ ದಾಸ್ ಮಾತನಾಡಿ, ಮಳೆಯಲ್ಲಿ ಚಿತ್ರೀಕರಣ ಮಾಡುವುದು ಸಹಾಸದ ಜತೆಗೆ ಕ್ರಿಯಾಶೀಲಾ ಕೆಲಸ. ಕನ್ನಡ ಹಲವು ಸಿನಿಮಾದ ಕೆಲಸವನ್ನು ನಾನು ಮಳೆಯಲ್ಲಿ ಮಾಡಿದ್ದು ಇದು ಹೊಸದಲ್ಲ. ಸಿನಿಮಾ ಕಥೆ ಸುಂದರವಾಗಿದ್ದು ಸಿನಿಮಾ ಅಚ್ಚುಕಟ್ಟಾಗಿ ಮೂಡಿಬರಲಿದೆ ಎಂದರು.
ಚಿತ್ರದಲ್ಲಿ 5 ಹಾಡುಗಳಿದ್ದು, ಯೋಗರಾಜ್ ಭಟ್ ಸೇರಿದಂತೆ ಇನ್ನಿತರರು ಸಾಹಿತ್ಯ ಬರೆಯಲಿದ್ದಾರೆ. ಸಂಗೀತ ನಿರ್ದೇಶನ ಇನ್ನೂ ಅಂತಿಮಗೊಂಡಿಲ್ಲ. ದೃಶ್ಯ ಚಿತ್ರದಂತೆ ಇದು ವಿಭಿನ್ನವಾಗಲಿದ್ದು ರವಿಚಂದ್ರನ್ ವೃತ್ತಿ ಬದುಕಿನ ಉತ್ತಮ ಚಿತ್ರವಾಗಿರಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

12 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago