Advertisement
ಸಾಂಸ್ಕೃತಿಕ

ಕೊಡಗಿನಲ್ಲಿ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ

Share

ಮಡಿಕೇರಿ : ಸುಂಟಿಕೊಪ್ಪ ಸಮೀಪದ ನಾಕೂರು ಬಳಿಯ ಹೋಂಸ್ಟೇಯೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ರವಿ ಚಿತ್ರದ ಚಿತ್ರೀಕರಣಕ್ಕೆ ಮುಹೂರ್ತ ನೆರವೇರಿತು.
ರವಿಚಂದ್ರನ್, ಶ್ರೀನಿವಾಸ್ ಪ್ರಭು, ಮೋನಿಷಾ, ಯತಿರಾಜ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ ವಿವಿದೆಡೆ ನಡೆಯಲಿದೆ.
ಸುದ್ದಿಗಾರರೊಂದಿಗೆ ನಟ ರವಿಚಂದ್ರನ್ ಮಾತನಾಡಿ, ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ. ಹೊಸಬರ ತಂಡದೊಂದಿಗೆ ಕೆಲಸ ಮಾಡುತ್ತಿರುವುದು ಸಂತಸ ತರಿಸಿದೆ. ಕೊಡಗಿನಲ್ಲಿ ಈ ಹಿಂದೆ ದೃಶ್ಯ ಚಿತ್ರದ ಚಿತ್ರೀಕರಣ ಮಾಡಿದ್ದು ನೆನಪಾಗುತ್ತಿದೆ. ಮಳೆ, ಪ್ರಕೃತಿಯಂದರೆ ನನಗಿಷ್ಟ. ಸಿನಿಮಾದ ಕಥೆ ಕೂಡ ಇದನ್ನೇ ಬಯಸಿದೆ. ಈ ನಿಟ್ಟಿನಲ್ಲಿ ಇಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ. ಚಿತ್ರದ ಚಿತ್ರೀಕರಣ ಶೇ. 90ರಷ್ಟು ಭಾಗ ಕೊಡಗಿನಲ್ಲಿರಲಿದೆ. ಇದು ರಿಮೇಕ್ ಸಿನಿಮಾವಾಗಿದ್ದು ಕನ್ನಡ ಸೊಗಡಿರಲಿದೆ ಎಂದರು.
ನಿರ್ದೇಶಕ ಅಜಿತ್ ಸರ್ಕಾರ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ ನಾನೇ ಬಂಡವಾಳ ಕೂಡ ಹೂಡಿದ್ದೇನೆ. ವಿಭಿನ್ನ ಕಥಾ ಹಂದರ ಹೊಂದಿದ್ದು ಸಸ್ಪೆನ್ಸ್ ಕಥೆಯಾಗಿದೆ. ಕಥೆಯ ಸುಳಿವನ್ನು ಊಹಿಸಲು ಅಸಾಧ್ಯ. ಅಷ್ಟೊಂದು ತಿರುವು ಚಿತ್ರಕಥೆಯಲ್ಲಿದ್ದು ಪ್ರೇಕ್ಷಕನನ್ನು ಸೆಳೆಯಲಿದೆ. ಜತೆಗೆ ಸಮಾಜಕ್ಕೆ ಸಂದೇಶ ಕೂಡ ಇದೆ ಎಂದು ಮಾಹಿತಿ ನೀಡಿದರು.
ಛಾಯಗ್ರಾಹಕ ಪಿಆರ್‍ಕೆ ದಾಸ್ ಮಾತನಾಡಿ, ಮಳೆಯಲ್ಲಿ ಚಿತ್ರೀಕರಣ ಮಾಡುವುದು ಸಹಾಸದ ಜತೆಗೆ ಕ್ರಿಯಾಶೀಲಾ ಕೆಲಸ. ಕನ್ನಡ ಹಲವು ಸಿನಿಮಾದ ಕೆಲಸವನ್ನು ನಾನು ಮಳೆಯಲ್ಲಿ ಮಾಡಿದ್ದು ಇದು ಹೊಸದಲ್ಲ. ಸಿನಿಮಾ ಕಥೆ ಸುಂದರವಾಗಿದ್ದು ಸಿನಿಮಾ ಅಚ್ಚುಕಟ್ಟಾಗಿ ಮೂಡಿಬರಲಿದೆ ಎಂದರು.
ಚಿತ್ರದಲ್ಲಿ 5 ಹಾಡುಗಳಿದ್ದು, ಯೋಗರಾಜ್ ಭಟ್ ಸೇರಿದಂತೆ ಇನ್ನಿತರರು ಸಾಹಿತ್ಯ ಬರೆಯಲಿದ್ದಾರೆ. ಸಂಗೀತ ನಿರ್ದೇಶನ ಇನ್ನೂ ಅಂತಿಮಗೊಂಡಿಲ್ಲ. ದೃಶ್ಯ ಚಿತ್ರದಂತೆ ಇದು ವಿಭಿನ್ನವಾಗಲಿದ್ದು ರವಿಚಂದ್ರನ್ ವೃತ್ತಿ ಬದುಕಿನ ಉತ್ತಮ ಚಿತ್ರವಾಗಿರಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

12 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

19 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

20 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago