Advertisement
ಸುದ್ದಿಗಳು

ಕೊಡಗಿನ ಸಾವಿರ ಏಕರೆ ಪ್ರದೇಶದಲ್ಲಿ ಮರಗಿಡಗಳನ್ನು ಬೆಳೆಯಿರಿ : ಸದ್ಗುರು ಜಗ್ಗಿ ವಾಸುದೇವ್ ಸಲಹೆ

Share

ಮಡಿಕೇರಿ :ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿರುವ ಜೀವನದಿ ಕಾವೇರಿಯ ಉಳಿವಿಗಾಗಿನ ‘ಕಾವೇರಿ ಕೂಗು’ ಅಭಿಯಾನಕ್ಕೆ ಕೊಡಗು ಹೆಚ್ಚಿನ ಸ್ಪಂದನ ನೀಡುವ ಅಗತ್ಯವಿದೆ ಎಂದು ಮನವಿ ಮಾಡಿರುವ ಈಶ ಫೌಂಡೇಶನ್‍ನ ಸದ್ಗುರು ಜಗ್ಗಿ ವಾಸುದೇವ್, ಕನಿಷ್ಠ ಜಿಲ್ಲೆಯ ಒಂದು ಸಾವಿರ ಏಕರೆ ಪ್ರದೇಶದಲ್ಲಿ ಮರಗಿಡಗಳನ್ನು ಬೆಳೆಸಲು ಇಲ್ಲಿನ ರೈತರು ಮುಂದಾಗಬೇಕೆಂದು ಕರೆ ನೀಡಿದ್ದಾರೆ.

ನಗರದ ಕ್ರಿಸ್ಟಲ್ ಹಾಲ್‍ನಲ್ಲಿ ಮಂಗಳವಾರ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಸದ್ಗುರು, ಕಾವೇರಿಯ ಪುನರುಜ್ಜೀವನಕ್ಕೆ ಪೂರಕವಾಗಿ, ಜಿಲ್ಲೆಯ ಬೆಳೆಗಾರರು ತಮ್ಮ ಕಾಫಿ ತೋಟಗಳಲ್ಲೆ ಅವರಿಗಿಷ್ಟ ಬಂದಂತಹ ಮರಗಿಡಗಳನ್ನು ಈ ಅಭಿಯಾನದ ಮೂಲಕ ಬೆಳೆಸುವಂತೆ ಸಲಹೆ ನಿಡಿದರು. ಜಿಲ್ಲೆಯಲ್ಲಿ ಗಟ್ಟಿ ಮರಗಳನ್ನು ಬೆಳೆಯಲು ಪೂರಕ ವಾತಾವರಣವಿದ್ದು, ಇಲ್ಲಿನ ಜನತೆ ಇದರತ್ತ ಆಸಕ್ತರಾಗುವಂತೆ ತಿಳಿಸಿದರು.

ಮರದ ಹಕ್ಕು ಬೇಕು:ಕಾವೇರಿ ಕೂಗು ಅಭಿಯಾನದಡಿ ಮರಗಿಡಗಳನ್ನು ಬೆಳೆಯುವ ಮೂಲಕ ಅರಣ್ಯ ಕೃಷಿಯತ್ತ ಜನರನ್ನು ಆಸಕ್ತರನ್ನಾಗಿ ಮಾಡಲು ಉದ್ದೇಶಿಸಿದೆ. ಆದರೆ, ತಮ್ಮ ಜಾಗದಲ್ಲಿರುವ ಮರದ ಹಕ್ಕು ರೈತನಿಗೆ ಇಲ್ಲದ ಸ್ಥಿತಿ ಇದೆ. ಆದರೆ, ಕೃಷಿಕ ತನ್ನ ಜಾಗದಲ್ಲಿ ಬೆಳೆದ ಮರ ಸೇರಿದಂತೆ ಎಲ್ಲ ಉತ್ಪನ್ನಗಳು ಆತನಿಗೆ ಸೇರಬೇಕು ಮತ್ತು ಅದನ್ನು ಆತ ತನ್ನಿಷ್ಟದಂತೆ ಬಳಸುವ ಅವಕಾಶ ದೊರಕುವುದು ಅತ್ಯವಶ್ಯವೆಂದು ಸದ್ಗುರುಗಳು ಪ್ರತಿಪಾದಿಸಿದರು.

ಸರಕಾರದೊಂದಿಗೆ ಚರ್ಚೆ:ಕಾವೇರಿ ಕೂಗು ಅಭಿಯಾನದಡಿ ಕಾವೇರಿಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ನದಿ ಪಾತ್ರದ ಪ್ರದೇಶಗಳಲ್ಲಿ ರೈತರ ಜಮೀನುಗಳಲ್ಲಿ ಮರಗಿಡಗಳನ್ನು ಬೆಳೆಯವ ವಿಚಾರ ಮತ್ತು ಬೆಳೆದ ಮರದ ಹಕ್ಕಿನ ವಿಚಾರಗಳ ಬಗ್ಗೆ ಇದೇ ಸೆ. 18 ರಂದು ಈಶ ಫೌಂಡೇಶನ್ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾವೇರಿ ಕಾಲಿಂಗ್: ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿನ ಹಸಿರ ವಲಯ ಅತ್ಯಂತ ಗಂಭೀರ ಸ್ವರೂಪದಲ್ಲಿ ಕಣ್ಮರೆಯಾಗುತ್ತಾ ಸಾಗಿದ್ದು, ಕಳೆದ ಏಳೆಂಟು ವರ್ಷಗಳಲ್ಲಿ ಕಾವೇರಿ ಆತಂಕಕಾರಿ ಸ್ವರೂಪದಲ್ಲಿ ಕ್ಷೀಣಿಸುತ್ತಿದ್ದಾಳೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ‘ಕಾವೇರಿ ಕಾಲಿಂಗ್’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು. ತಲಕಾವೇರಿಯಿಂದ ಪೂಂಪುಹಾರ್‍ವರೆಗೆ ಕಾವೇರಿ ನದಿ ಹರಿಯುವ ನದಿಯ ಇಕ್ಕೆಲಗಳಲ್ಲಿ 242 ಕೋಟಿ ಮರಗಿಡಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಲಾಗಿದೆ. ಇದರ ಅನುಷ್ಟಾನದೊಂದಿಗೆ ಕಾವೇರಿಯ ಸ್ವರೂಪ ಬದಲಾಗುವುದರೊಂದಿಗೆ, ನದಿ ಪಾತ್ರದಲ್ಲಿ ಅರಣ್ಯ ಕೃಷಿ ನಡೆಸಿದ ರೈತ ಸಮುದಾಯವು ಅಭಿವೃದ್ಧಿಯನ್ನು ಕಾಣಲು ಸಾಧ್ಯವಿದೆಯೆಂದು ಸದ್ಗುರು ಹೇಳಿದರು.ಕಾವೇರಿ ನದಿ ಕಳೆದ ಕೆಲ ವರ್ಷಗಳಲ್ಲಿ ಕ್ಷೀಣಿಸುತ್ತಿದ್ದು, ವರ್ಷದ ಐದೂವರೆ ತಿಂಗಳಷ್ಟು ಅವಧಿಯಲ್ಲಿ ಕಾವೇರಿ ನದಿಯ ನೀರು ಸಮುದ್ರವನ್ನೆ ಸೇರುವುದಿಲ್ಲ. ಕಾರಣ, ನದಿ ಸಮುದ್ರ ಸೇರುವ ಪ್ರದೇಶದಿಂದ ಹಲವು ಕಿ.ಮೀ. ದೂರದಲ್ಲೆ ಬತ್ತಿ ಹೋಗುತ್ತಿರುವುದಾಗಿ ಕಳವಳ ವ್ಯಕ್ತಪಡಿಸಿ, ಇದಕ್ಕೆ ಕಾರಣ ನೀರಿನ ಅಸಮರ್ಪಕವಾದ ಬಳಕೆಯೇ ಆಗಿದೆಯೆಂದು ನೊಂದು ನುಡಿದರು. ಈ ಗಂಭೀರ ಸಮಸ್ಯೆಯ ಬಗ್ಗೆ ನಮಗೆಲ್ಲರಿಗು ಅರಿವಿದ್ದು, ಪರಿಹಾರ ಕ್ರಮದ ಬಗ್ಗೆಯೂ ತಿಳುವಳಿಕೆ ಇದೆಯಾದ್ದರಿಂದ, ಕಾವೇರಿ ಕೂಗು ಅಭಿಯಾನದ ಮೂಲಕ ಕಾವೇರಿಯ ಪುನಶ್ಚೇತನಕ್ಕೆ ಕೈಜೋಡಿಸುವಂತೆ ಕರೆ ನಿಡಿದರು.

ಸಭೆಯಲ್ಲಿ ಸಂಸದೆ ಶೊಭಾ ಕರಂದ್ಲಾಜೆ, ಶಾಸಕ ಕೆ.ಜಿ. ಬೋಪಯ್ಯ, ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ, ಚಲನ ಚಿತ್ರ ನಟರಾದ ದಿಗಂತ್ ಮತ್ತು ರಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

15 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago