Advertisement
ಸುದ್ದಿಗಳು

ಕೊಡಗಿನ 4148 ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ವಿತರಣೆ

Share

ಮಡಿಕೇರಿ : ಪ್ರಸಕ್ತ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರಾಗಿರುವ 4,148 ಕುಟುಂಬಗಳಿಗೆ ದಿನಬಳಕೆ ಸಾಮಾಗ್ರಿಗಳನ್ನೊಳಗೊಂಡ ಆಹಾರದ ಕಿಟ್‍ಗಳೊಂದಿಗೆ 10 ಸಾವಿರ ರೂ.ಗಳ ಚೆಕ್‍ಗಳನ್ನು ವಿತರಿಸಲಾಗುತ್ತಿದ್ದು, ಆ.24ರೊಳಗೆ ಚೆಕ್ ವಿತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸಂತ್ರಸ್ತರಿಗಾಗಿ ತೆರೆಯಲಾದ ಬಹುತೇಕ ಪರಿಹಾರ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ವೀರಾಜಪೇಟೆ ತಾಲೂಕಿನ 4 ಕೇಂದ್ರಗಳಲ್ಲಿ 37ಕುಟುಂಬಗಳ 149 ಸದಸ್ಯರು ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇದುವರೆಗೆ ನಡೆದ ಪ್ರಕೃತಿ ವಿಕೋಪದಲ್ಲಿ ಒಟ್ಟು 14 ಮಂದಿ ಸಾವಿಗೀಡಾಗಿದ್ದು, ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರಕಾರ ಪ್ರಕೃತಿ ವಿಕೋಪ ಮಾರ್ಗಸೂಚಿಯಂತೆ ಅತಿವೃಷ್ಟಿಯಿಂದ ಬಟ್ಟೆ ಮತ್ತು ದಿನಬಳಕೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 3,800 ರೂ.ಗಳಂತೆ ಪರಿಹಾರ ಪಾವತಿಸಲು ಅವಕಾಶವಿದ್ದು, ಇದೀಗ ಪ್ರಕೃತಿ ವಿಕೋಪ ಮಾರ್ಗಸೂಚಿಯಡಿ ಹೆಚ್ಚುವರಿಯಾಗಿ 6,200ರೂ.ಗಳನ್ನು ಸೇರಿಸಿ ನೀಡುವಂತೆ ರಾಜ್ಯ ಸರಕಾರ ಆದೇಶ  ನೀಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ 10 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯ ಮೂರು ತಾಲೂಕಿನ ಪರಿಹಾರ ಕೇಂದ್ರಗಳಲ್ಲಿದ್ದ ಮತ್ತು ಬಂಧುಗಳ ಮನೆ ಅಥವಾ ಇನ್ನಿತರ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದ ಒಟ್ಟು 4,148 ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳ ಚೆಕ್ ವಿತರಿಸಲು ವಿಶೇಷ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

16 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

20 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

21 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

21 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago