ಮಡಿಕೇರಿ : ಪ್ರಸಕ್ತ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರಾಗಿರುವ 4,148 ಕುಟುಂಬಗಳಿಗೆ ದಿನಬಳಕೆ ಸಾಮಾಗ್ರಿಗಳನ್ನೊಳಗೊಂಡ ಆಹಾರದ ಕಿಟ್ಗಳೊಂದಿಗೆ 10 ಸಾವಿರ ರೂ.ಗಳ ಚೆಕ್ಗಳನ್ನು ವಿತರಿಸಲಾಗುತ್ತಿದ್ದು, ಆ.24ರೊಳಗೆ ಚೆಕ್ ವಿತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸಂತ್ರಸ್ತರಿಗಾಗಿ ತೆರೆಯಲಾದ ಬಹುತೇಕ ಪರಿಹಾರ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ವೀರಾಜಪೇಟೆ ತಾಲೂಕಿನ 4 ಕೇಂದ್ರಗಳಲ್ಲಿ 37ಕುಟುಂಬಗಳ 149 ಸದಸ್ಯರು ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇದುವರೆಗೆ ನಡೆದ ಪ್ರಕೃತಿ ವಿಕೋಪದಲ್ಲಿ ಒಟ್ಟು 14 ಮಂದಿ ಸಾವಿಗೀಡಾಗಿದ್ದು, ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರಕಾರ ಪ್ರಕೃತಿ ವಿಕೋಪ ಮಾರ್ಗಸೂಚಿಯಂತೆ ಅತಿವೃಷ್ಟಿಯಿಂದ ಬಟ್ಟೆ ಮತ್ತು ದಿನಬಳಕೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 3,800 ರೂ.ಗಳಂತೆ ಪರಿಹಾರ ಪಾವತಿಸಲು ಅವಕಾಶವಿದ್ದು, ಇದೀಗ ಪ್ರಕೃತಿ ವಿಕೋಪ ಮಾರ್ಗಸೂಚಿಯಡಿ ಹೆಚ್ಚುವರಿಯಾಗಿ 6,200ರೂ.ಗಳನ್ನು ಸೇರಿಸಿ ನೀಡುವಂತೆ ರಾಜ್ಯ ಸರಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ 10 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯ ಮೂರು ತಾಲೂಕಿನ ಪರಿಹಾರ ಕೇಂದ್ರಗಳಲ್ಲಿದ್ದ ಮತ್ತು ಬಂಧುಗಳ ಮನೆ ಅಥವಾ ಇನ್ನಿತರ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದ ಒಟ್ಟು 4,148 ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳ ಚೆಕ್ ವಿತರಿಸಲು ವಿಶೇಷ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…