Advertisement
ಸುದ್ದಿಗಳು

ಕೊಡಗಿನ 4148 ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ವಿತರಣೆ

Share

ಮಡಿಕೇರಿ : ಪ್ರಸಕ್ತ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರಾಗಿರುವ 4,148 ಕುಟುಂಬಗಳಿಗೆ ದಿನಬಳಕೆ ಸಾಮಾಗ್ರಿಗಳನ್ನೊಳಗೊಂಡ ಆಹಾರದ ಕಿಟ್‍ಗಳೊಂದಿಗೆ 10 ಸಾವಿರ ರೂ.ಗಳ ಚೆಕ್‍ಗಳನ್ನು ವಿತರಿಸಲಾಗುತ್ತಿದ್ದು, ಆ.24ರೊಳಗೆ ಚೆಕ್ ವಿತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸಂತ್ರಸ್ತರಿಗಾಗಿ ತೆರೆಯಲಾದ ಬಹುತೇಕ ಪರಿಹಾರ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ವೀರಾಜಪೇಟೆ ತಾಲೂಕಿನ 4 ಕೇಂದ್ರಗಳಲ್ಲಿ 37ಕುಟುಂಬಗಳ 149 ಸದಸ್ಯರು ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇದುವರೆಗೆ ನಡೆದ ಪ್ರಕೃತಿ ವಿಕೋಪದಲ್ಲಿ ಒಟ್ಟು 14 ಮಂದಿ ಸಾವಿಗೀಡಾಗಿದ್ದು, ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರಕಾರ ಪ್ರಕೃತಿ ವಿಕೋಪ ಮಾರ್ಗಸೂಚಿಯಂತೆ ಅತಿವೃಷ್ಟಿಯಿಂದ ಬಟ್ಟೆ ಮತ್ತು ದಿನಬಳಕೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 3,800 ರೂ.ಗಳಂತೆ ಪರಿಹಾರ ಪಾವತಿಸಲು ಅವಕಾಶವಿದ್ದು, ಇದೀಗ ಪ್ರಕೃತಿ ವಿಕೋಪ ಮಾರ್ಗಸೂಚಿಯಡಿ ಹೆಚ್ಚುವರಿಯಾಗಿ 6,200ರೂ.ಗಳನ್ನು ಸೇರಿಸಿ ನೀಡುವಂತೆ ರಾಜ್ಯ ಸರಕಾರ ಆದೇಶ  ನೀಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ 10 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯ ಮೂರು ತಾಲೂಕಿನ ಪರಿಹಾರ ಕೇಂದ್ರಗಳಲ್ಲಿದ್ದ ಮತ್ತು ಬಂಧುಗಳ ಮನೆ ಅಥವಾ ಇನ್ನಿತರ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದ ಒಟ್ಟು 4,148 ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳ ಚೆಕ್ ವಿತರಿಸಲು ವಿಶೇಷ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

43 minutes ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

6 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

14 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

14 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago