ಮಡಿಕೇರಿ : ಪ್ರಸಕ್ತ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರಾಗಿರುವ 4,148 ಕುಟುಂಬಗಳಿಗೆ ದಿನಬಳಕೆ ಸಾಮಾಗ್ರಿಗಳನ್ನೊಳಗೊಂಡ ಆಹಾರದ ಕಿಟ್ಗಳೊಂದಿಗೆ 10 ಸಾವಿರ ರೂ.ಗಳ ಚೆಕ್ಗಳನ್ನು ವಿತರಿಸಲಾಗುತ್ತಿದ್ದು, ಆ.24ರೊಳಗೆ ಚೆಕ್ ವಿತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸಂತ್ರಸ್ತರಿಗಾಗಿ ತೆರೆಯಲಾದ ಬಹುತೇಕ ಪರಿಹಾರ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ವೀರಾಜಪೇಟೆ ತಾಲೂಕಿನ 4 ಕೇಂದ್ರಗಳಲ್ಲಿ 37ಕುಟುಂಬಗಳ 149 ಸದಸ್ಯರು ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇದುವರೆಗೆ ನಡೆದ ಪ್ರಕೃತಿ ವಿಕೋಪದಲ್ಲಿ ಒಟ್ಟು 14 ಮಂದಿ ಸಾವಿಗೀಡಾಗಿದ್ದು, ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರಕಾರ ಪ್ರಕೃತಿ ವಿಕೋಪ ಮಾರ್ಗಸೂಚಿಯಂತೆ ಅತಿವೃಷ್ಟಿಯಿಂದ ಬಟ್ಟೆ ಮತ್ತು ದಿನಬಳಕೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 3,800 ರೂ.ಗಳಂತೆ ಪರಿಹಾರ ಪಾವತಿಸಲು ಅವಕಾಶವಿದ್ದು, ಇದೀಗ ಪ್ರಕೃತಿ ವಿಕೋಪ ಮಾರ್ಗಸೂಚಿಯಡಿ ಹೆಚ್ಚುವರಿಯಾಗಿ 6,200ರೂ.ಗಳನ್ನು ಸೇರಿಸಿ ನೀಡುವಂತೆ ರಾಜ್ಯ ಸರಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ 10 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯ ಮೂರು ತಾಲೂಕಿನ ಪರಿಹಾರ ಕೇಂದ್ರಗಳಲ್ಲಿದ್ದ ಮತ್ತು ಬಂಧುಗಳ ಮನೆ ಅಥವಾ ಇನ್ನಿತರ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದ ಒಟ್ಟು 4,148 ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳ ಚೆಕ್ ವಿತರಿಸಲು ವಿಶೇಷ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…