ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,
ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್ಡಿಆರ್ ಎಫ್, ಎಸ್ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,
ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್ಡಿಆರ್ ಎಫ್, ಎಸ್ಡಿಆರ್ಎಫ್ ನಡಿ 0.282 ಕೋಟಿ ರೂ,
ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್ಡಿಆರ್ ಎಫ್, ಎಸ್ಡಿಆರ್ ಎಫ್ನಡಿ 1.672 ಕೋಟಿ ರೂ,
ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್ನಡಿ 15.087 ಕೋಟಿ ರೂ,
ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,
ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,
ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,
ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,
ಬೆಳೆಹಾನಿ 32,198 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್ 38.050 ಕೋಟಿ ರೂ,
ಬೆಳೆಹಾನಿ 1,185 ಪ್ರಕರಣಗಳಿಗೆ ಎನ್ಡಿಆರ್ ಎಫ್/ ಎಸ್ಡಿಆರ್ ಎಫ್ 2.970 ಕೋಟಿ ರೂ,
ಬೆಳೆಹಾನಿ 351 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಎಫ್ 20.920 ಕೋಟಿ ರೂ,
ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…