Advertisement
ಜಿಲ್ಲೆ

ಕೊಡಗು ಪ್ರಕೃತಿ ವಿಕೋಪ : ವಿತರಣೆಯಾದ ಪರಿಹಾರದ ಮೊತ್ತ 89 ಕೋಟಿ

Share

ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement

ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,

ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,

ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್‍ಎಫ್ ನಡಿ 0.282 ಕೋಟಿ ರೂ,

ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್‍ನಡಿ 1.672 ಕೋಟಿ ರೂ,

ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್‍ನಡಿ 15.087 ಕೋಟಿ ರೂ,

ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,

ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,

ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,

ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,

ಬೆಳೆಹಾನಿ 32,198 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್ 38.050 ಕೋಟಿ ರೂ,

ಬೆಳೆಹಾನಿ 1,185 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ ಎಸ್‍ಡಿಆರ್ ಎಫ್ 2.970 ಕೋಟಿ ರೂ,

ಬೆಳೆಹಾನಿ 351 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಎಫ್ 20.920 ಕೋಟಿ ರೂ,

ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago