ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,
ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್ಡಿಆರ್ ಎಫ್, ಎಸ್ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,
ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್ಡಿಆರ್ ಎಫ್, ಎಸ್ಡಿಆರ್ಎಫ್ ನಡಿ 0.282 ಕೋಟಿ ರೂ,
ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್ಡಿಆರ್ ಎಫ್, ಎಸ್ಡಿಆರ್ ಎಫ್ನಡಿ 1.672 ಕೋಟಿ ರೂ,
ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್ನಡಿ 15.087 ಕೋಟಿ ರೂ,
ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,
ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,
ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,
ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,
ಬೆಳೆಹಾನಿ 32,198 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್ 38.050 ಕೋಟಿ ರೂ,
ಬೆಳೆಹಾನಿ 1,185 ಪ್ರಕರಣಗಳಿಗೆ ಎನ್ಡಿಆರ್ ಎಫ್/ ಎಸ್ಡಿಆರ್ ಎಫ್ 2.970 ಕೋಟಿ ರೂ,
ಬೆಳೆಹಾನಿ 351 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಎಫ್ 20.920 ಕೋಟಿ ರೂ,
ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್ಡಿಆರ್ ಎಫ್/ಎಸ್ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…