ಸುಳ್ಯ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರಗಳಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಉಸ್ತುವಾರಿಗಳಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್ ಮತ್ತು ಎಂ. ವೆಂಕಪ್ಪ ಗೌಡ ನೇಮಕಗೊಂಡಿದ್ದಾರೆ.
ಕ್ಷೇತ್ರಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭೆ ಅಭ್ಯರ್ಥಿಗಳು ಹಾಗು ಡಿಸಿಸಿ, ಬಿಸಿಸಿ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಸಂಪರ್ಕಿಸಿ ಅಭಿಪ್ರಾಯ ಕ್ರೋಢೀಕರಿಸಿ ಒಮ್ಮತದ ವ್ಯಕ್ತಿಗಳನ್ನು ಬ್ಲಾಕ್ ಅಧ್ಯಕ್ಷರಾಗಿ ನೇಮಿಸಲು ಶಿಫಾರಸ್ಸು ಮಾಡಲು ಕೆಪಿಸಿಸಿ ಇವರಿಗೆ ಸೂಚನೆ ನೀಡಿದೆ. ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ವಿರಾಜಪೇಟೆ, ಪೊನ್ನಂಪೇಟೆ ಹಾಗು ನಾಪೊಕ್ಲು ಬ್ಲಾಕ್ ಗಳ ಉಸ್ತುವಾರಿ ಟಿ.ಎಂ. ಶಹೀದ್ ಗೆ ಮತ್ತು ಮಡಿಕೇರಿ ಕ್ಷೇತ್ರದ ಬ್ಲಾಕ್ ಗಳ ಉಸ್ತುವಾರಿ ಎಂ. ವೆಂಕಪ್ಪ ಗೌಡರಿಗೆ ನೀಡಲಾಗಿದೆ.
ಕೊಡಗು ಜಿಲ್ಲೆಯ ಬ್ಲಾಕ್ ಸಮಿತಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಸ್ಥಳೀಯ ಮುಖಂಡರು ಮನವಿ ಮಾಡಿರುವ ಹಿನ್ನಲೆಯಲ್ಲಿ ಒಮ್ಮತದ ಅಭ್ಯರ್ಥಿಯ ಆಯ್ಕೆಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಮಾಡಿದೆ ಎಂದು ಟಿ.ಎಂ. ಶಹೀದ್ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…