ಸುಳ್ಯ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರಗಳಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಉಸ್ತುವಾರಿಗಳಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್ ಮತ್ತು ಎಂ. ವೆಂಕಪ್ಪ ಗೌಡ ನೇಮಕಗೊಂಡಿದ್ದಾರೆ.
ಕ್ಷೇತ್ರಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭೆ ಅಭ್ಯರ್ಥಿಗಳು ಹಾಗು ಡಿಸಿಸಿ, ಬಿಸಿಸಿ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಸಂಪರ್ಕಿಸಿ ಅಭಿಪ್ರಾಯ ಕ್ರೋಢೀಕರಿಸಿ ಒಮ್ಮತದ ವ್ಯಕ್ತಿಗಳನ್ನು ಬ್ಲಾಕ್ ಅಧ್ಯಕ್ಷರಾಗಿ ನೇಮಿಸಲು ಶಿಫಾರಸ್ಸು ಮಾಡಲು ಕೆಪಿಸಿಸಿ ಇವರಿಗೆ ಸೂಚನೆ ನೀಡಿದೆ. ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ವಿರಾಜಪೇಟೆ, ಪೊನ್ನಂಪೇಟೆ ಹಾಗು ನಾಪೊಕ್ಲು ಬ್ಲಾಕ್ ಗಳ ಉಸ್ತುವಾರಿ ಟಿ.ಎಂ. ಶಹೀದ್ ಗೆ ಮತ್ತು ಮಡಿಕೇರಿ ಕ್ಷೇತ್ರದ ಬ್ಲಾಕ್ ಗಳ ಉಸ್ತುವಾರಿ ಎಂ. ವೆಂಕಪ್ಪ ಗೌಡರಿಗೆ ನೀಡಲಾಗಿದೆ.
ಕೊಡಗು ಜಿಲ್ಲೆಯ ಬ್ಲಾಕ್ ಸಮಿತಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಸ್ಥಳೀಯ ಮುಖಂಡರು ಮನವಿ ಮಾಡಿರುವ ಹಿನ್ನಲೆಯಲ್ಲಿ ಒಮ್ಮತದ ಅಭ್ಯರ್ಥಿಯ ಆಯ್ಕೆಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಮಾಡಿದೆ ಎಂದು ಟಿ.ಎಂ. ಶಹೀದ್ ತಿಳಿಸಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…