ಕೊಡಗು ಮಳೆಹಾನಿ ವೈಯಕ್ತಿಕ ಪ್ರಕರಣ : 92.79 ಕೋಟಿ ರೂ. ಪರಿಹಾರ ವಿತರಣೆ

June 2, 2019
10:45 AM

ಮಡಿಕೇರಿ : ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳ ಹಾನಿ ಮತ್ತು ಭೂಕುಸಿತ ಇತ್ಯಾದಿಗಳಿಂ  ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ ಸಂತ್ರ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು. ಹಾಗಿದ್ದರೂ  ಬಹಳಷ್ಟು ಸಾರ್ವಜನಿಕರು ಪರಿಹಾರ ಪಾವತಿಯಾಗದಿರುವ ಬಗ್ಗೆ ಪದೇ ಪದೇ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ವಿಚಾರಿಸುತ್ತಿದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತವು ಈ ಸಮಸ್ಯೆಯನ್ನು ಪರಿಹರಿಸಲು ಮೇ 27 ರಿಂದ ಮೇ 29 ರವರೆಗೆ ಮೂರು ದಿನಗಳ ಕಾಲ ನಗರದ ಜಿಲ್ಲಾಡಳಿತ ಭವನದಲ್ಲಿ ಪರಿಹಾರ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪರಿಹಾರ ಅದಾಲತ್‍ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 3,148 ಜನರು ಪರಿಹಾರ ಅದಾಲತ್‍ಗೆ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದು, ಈ ಪೈಕಿ 1577 ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾದ ಪ್ರಕರಣ ಹೊರತುಪಡಿಸಿ, ಒಟ್ಟು 1571 ಅರ್ಜಿ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪರಿಹಾರ ಅದಾಲತ್‍ನಲ್ಲಿ ಸ್ವೀಕೃತವಾದ ಅಹವಾಲುಗಳನ್ವಯ ಶೀಘ್ರವಾಗಿ ಕ್ರಮ ಕೈಗೊಂಡು ಭಾಗಶಃ ಬೆಳೆ ಪರಿಹಾರ ಪಾವತಿಯಾದ 4,487 ಪ್ರಕರಣಗಳಲ್ಲಿ ಸುಮಾರು 3.70 ಕೋಟಿ ಪರಿಹಾರವನ್ನು ಸಂಭಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಯಿಸಲಾಗಿದೆ.  ಇದು ಸೇರಿದಂತೆ ಪ್ರಸ್ತುತ ವೈಯಕ್ತಿಕ ಪ್ರಕರಣಗಳಲ್ಲಿ ಪರಿಹಾರ ವಿತರಿಸಿರುವ ಒಟ್ಟು ಮೊತ್ತ  92.79 ಕೋಟಿ ರೂ. ಆಗಿದೆ. ಉಳಿಕೆ ಒಟ್ಟು 1571 ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಕ್ಷೇತ್ರ ಪರಿಶೀಲನೆ ಮಾಡಿಸಿ ನಂತರ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror