Advertisement
ಜಿಲ್ಲೆ

ಕೊಡಗು ಮಳೆಹಾನಿ ವೈಯಕ್ತಿಕ ಪ್ರಕರಣ : 92.79 ಕೋಟಿ ರೂ. ಪರಿಹಾರ ವಿತರಣೆ

Share

ಮಡಿಕೇರಿ : ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳ ಹಾನಿ ಮತ್ತು ಭೂಕುಸಿತ ಇತ್ಯಾದಿಗಳಿಂ  ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ ಸಂತ್ರ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು. ಹಾಗಿದ್ದರೂ  ಬಹಳಷ್ಟು ಸಾರ್ವಜನಿಕರು ಪರಿಹಾರ ಪಾವತಿಯಾಗದಿರುವ ಬಗ್ಗೆ ಪದೇ ಪದೇ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ವಿಚಾರಿಸುತ್ತಿದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತವು ಈ ಸಮಸ್ಯೆಯನ್ನು ಪರಿಹರಿಸಲು ಮೇ 27 ರಿಂದ ಮೇ 29 ರವರೆಗೆ ಮೂರು ದಿನಗಳ ಕಾಲ ನಗರದ ಜಿಲ್ಲಾಡಳಿತ ಭವನದಲ್ಲಿ ಪರಿಹಾರ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪರಿಹಾರ ಅದಾಲತ್‍ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 3,148 ಜನರು ಪರಿಹಾರ ಅದಾಲತ್‍ಗೆ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದು, ಈ ಪೈಕಿ 1577 ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾದ ಪ್ರಕರಣ ಹೊರತುಪಡಿಸಿ, ಒಟ್ಟು 1571 ಅರ್ಜಿ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪರಿಹಾರ ಅದಾಲತ್‍ನಲ್ಲಿ ಸ್ವೀಕೃತವಾದ ಅಹವಾಲುಗಳನ್ವಯ ಶೀಘ್ರವಾಗಿ ಕ್ರಮ ಕೈಗೊಂಡು ಭಾಗಶಃ ಬೆಳೆ ಪರಿಹಾರ ಪಾವತಿಯಾದ 4,487 ಪ್ರಕರಣಗಳಲ್ಲಿ ಸುಮಾರು 3.70 ಕೋಟಿ ಪರಿಹಾರವನ್ನು ಸಂಭಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಯಿಸಲಾಗಿದೆ.  ಇದು ಸೇರಿದಂತೆ ಪ್ರಸ್ತುತ ವೈಯಕ್ತಿಕ ಪ್ರಕರಣಗಳಲ್ಲಿ ಪರಿಹಾರ ವಿತರಿಸಿರುವ ಒಟ್ಟು ಮೊತ್ತ  92.79 ಕೋಟಿ ರೂ. ಆಗಿದೆ. ಉಳಿಕೆ ಒಟ್ಟು 1571 ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಕ್ಷೇತ್ರ ಪರಿಶೀಲನೆ ಮಾಡಿಸಿ ನಂತರ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

9 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

16 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago