Advertisement
ಜಿಲ್ಲೆ

ಕೊಡಗು ಮಳೆಹಾನಿ ವೈಯಕ್ತಿಕ ಪ್ರಕರಣ : 92.79 ಕೋಟಿ ರೂ. ಪರಿಹಾರ ವಿತರಣೆ

Share

ಮಡಿಕೇರಿ : ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳ ಹಾನಿ ಮತ್ತು ಭೂಕುಸಿತ ಇತ್ಯಾದಿಗಳಿಂ  ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ ಸಂತ್ರ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು. ಹಾಗಿದ್ದರೂ  ಬಹಳಷ್ಟು ಸಾರ್ವಜನಿಕರು ಪರಿಹಾರ ಪಾವತಿಯಾಗದಿರುವ ಬಗ್ಗೆ ಪದೇ ಪದೇ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ವಿಚಾರಿಸುತ್ತಿದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತವು ಈ ಸಮಸ್ಯೆಯನ್ನು ಪರಿಹರಿಸಲು ಮೇ 27 ರಿಂದ ಮೇ 29 ರವರೆಗೆ ಮೂರು ದಿನಗಳ ಕಾಲ ನಗರದ ಜಿಲ್ಲಾಡಳಿತ ಭವನದಲ್ಲಿ ಪರಿಹಾರ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪರಿಹಾರ ಅದಾಲತ್‍ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 3,148 ಜನರು ಪರಿಹಾರ ಅದಾಲತ್‍ಗೆ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದು, ಈ ಪೈಕಿ 1577 ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾದ ಪ್ರಕರಣ ಹೊರತುಪಡಿಸಿ, ಒಟ್ಟು 1571 ಅರ್ಜಿ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪರಿಹಾರ ಅದಾಲತ್‍ನಲ್ಲಿ ಸ್ವೀಕೃತವಾದ ಅಹವಾಲುಗಳನ್ವಯ ಶೀಘ್ರವಾಗಿ ಕ್ರಮ ಕೈಗೊಂಡು ಭಾಗಶಃ ಬೆಳೆ ಪರಿಹಾರ ಪಾವತಿಯಾದ 4,487 ಪ್ರಕರಣಗಳಲ್ಲಿ ಸುಮಾರು 3.70 ಕೋಟಿ ಪರಿಹಾರವನ್ನು ಸಂಭಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಯಿಸಲಾಗಿದೆ.  ಇದು ಸೇರಿದಂತೆ ಪ್ರಸ್ತುತ ವೈಯಕ್ತಿಕ ಪ್ರಕರಣಗಳಲ್ಲಿ ಪರಿಹಾರ ವಿತರಿಸಿರುವ ಒಟ್ಟು ಮೊತ್ತ  92.79 ಕೋಟಿ ರೂ. ಆಗಿದೆ. ಉಳಿಕೆ ಒಟ್ಟು 1571 ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಕ್ಷೇತ್ರ ಪರಿಶೀಲನೆ ಮಾಡಿಸಿ ನಂತರ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago