Advertisement
ಜಿಲ್ಲೆ

ಕೊಡಗು ಮಳೆಹಾನಿ ವೈಯಕ್ತಿಕ ಪ್ರಕರಣ : 92.79 ಕೋಟಿ ರೂ. ಪರಿಹಾರ ವಿತರಣೆ

Share

ಮಡಿಕೇರಿ : ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳ ಹಾನಿ ಮತ್ತು ಭೂಕುಸಿತ ಇತ್ಯಾದಿಗಳಿಂ  ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ ಸಂತ್ರ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು. ಹಾಗಿದ್ದರೂ  ಬಹಳಷ್ಟು ಸಾರ್ವಜನಿಕರು ಪರಿಹಾರ ಪಾವತಿಯಾಗದಿರುವ ಬಗ್ಗೆ ಪದೇ ಪದೇ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ವಿಚಾರಿಸುತ್ತಿದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತವು ಈ ಸಮಸ್ಯೆಯನ್ನು ಪರಿಹರಿಸಲು ಮೇ 27 ರಿಂದ ಮೇ 29 ರವರೆಗೆ ಮೂರು ದಿನಗಳ ಕಾಲ ನಗರದ ಜಿಲ್ಲಾಡಳಿತ ಭವನದಲ್ಲಿ ಪರಿಹಾರ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪರಿಹಾರ ಅದಾಲತ್‍ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 3,148 ಜನರು ಪರಿಹಾರ ಅದಾಲತ್‍ಗೆ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದು, ಈ ಪೈಕಿ 1577 ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾದ ಪ್ರಕರಣ ಹೊರತುಪಡಿಸಿ, ಒಟ್ಟು 1571 ಅರ್ಜಿ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪರಿಹಾರ ಅದಾಲತ್‍ನಲ್ಲಿ ಸ್ವೀಕೃತವಾದ ಅಹವಾಲುಗಳನ್ವಯ ಶೀಘ್ರವಾಗಿ ಕ್ರಮ ಕೈಗೊಂಡು ಭಾಗಶಃ ಬೆಳೆ ಪರಿಹಾರ ಪಾವತಿಯಾದ 4,487 ಪ್ರಕರಣಗಳಲ್ಲಿ ಸುಮಾರು 3.70 ಕೋಟಿ ಪರಿಹಾರವನ್ನು ಸಂಭಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಯಿಸಲಾಗಿದೆ.  ಇದು ಸೇರಿದಂತೆ ಪ್ರಸ್ತುತ ವೈಯಕ್ತಿಕ ಪ್ರಕರಣಗಳಲ್ಲಿ ಪರಿಹಾರ ವಿತರಿಸಿರುವ ಒಟ್ಟು ಮೊತ್ತ  92.79 ಕೋಟಿ ರೂ. ಆಗಿದೆ. ಉಳಿಕೆ ಒಟ್ಟು 1571 ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಕ್ಷೇತ್ರ ಪರಿಶೀಲನೆ ಮಾಡಿಸಿ ನಂತರ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

7 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

7 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

20 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

21 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

21 hours ago