ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡ ನೂತನ ಸಭಾಭವನವನ್ನು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ ಚಿದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಸಿ. ಅನಂತ, ಮಡಿಕೇರಿ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ಗ್ರಾ.ಪಂ. ಉಪಾಧ್ಯಕ್ಷ ಸುಂದರ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾ.ಪಂ.ಸದಸ್ಯರುಗಳಾದ ರಮಾ ಬಾಲಚಂದ್ರ ಕಳಗಿ, ಕೃಷ್ಣ ಬಿ.ಕೆ, ಯಮುನ ಕಲ್ಯಾಳ, ರಾಜೇಶ್ವರಿ, ಗಿರಿಜ, ಮಾಲತಿ, ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ, ನಿರ್ದೇಶಕರಾದ ಬಿ.ಎ.ಗಣಪತಿ, ವಾಣಿ ಜಗದೀಶ್, ಕಿಶನ್ ಕಲ್ಯಾಳ, ಯಶವಂತ ದೇವರಗುಂಡ, ಮಾಜಿ ನಿರ್ದೇಶಕ ತೀರ್ಥಪ್ರಸಾದ್ ಕೊಯನಾಡು, ರಮಾನಂದ ಬಾಳಕಜೆ, ಎ.ಪಿ.ಎಂ.ಸಿ. ನಿರ್ದೇಶಕ ದೇವಪ್ಪ ಕೊಯನಾಡು, ಕೊಡಗು ಸಂಪಾಜೆ ಬಿಜೆಪಿ ಅಧ್ಯಕ್ಷ ಒ.ಆರ್. ಮಾಯಿಲಪ್ಪ, ಕೊಯನಾಡು ಗಣಪತಿ ದೇವಸ್ಥಾನದ ಅಧ್ಯಕ್ಷ ಕೆ. ಬಿ. ಉಲ್ಲಾಸ್, ಕೊಡಗು ಸಂಪಾಜೆ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶ್ರೀಧರ ಪಡ್ಪು ಮತ್ತಿತರರು ಉಪಸ್ಥಿತರಿದ್ದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…