ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ನಿರ್ಣಯಿಸಲಾಯಿತು. ಕಲ್ಲಾಳ ರಸ್ತೆಯನ್ನು ಗ್ರಾಮ ಸಡಕ್ ಯೋಜನೆಗೆ ಸೇರ್ಪಡೆ ಮಾಡಿ ಸರಕಾರಕ್ಕೆ ಅನುಧಾನ ಕೋರಿ ಪತ್ರ ಬರೆಯಲು ತೀರ್ಮಾನಿಸಲಾಯಿತು.
ರಸ್ತೆ, ಕುಡಿಯುವ ನೀರು, ಬೀದಿ ದೀಪಗಳ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮದ ಪಂಚಾಯತ್ ರಸ್ತೆ ವಿಪರೀತ ಗಾಳಿ ಮಳೆಯಿಂದ ಹಾನಿಯಾದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಅನುದಾನ ಕೋರುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ವರದಿ ವಾಚಿಸಿದರು, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಗಿರಿಜಾ, ಯಮುನಾ ಗಿರೀಶ್, ಕೃಷ್ಣ ಬೆಳ್ಚಪಾಡ, ರಾಜೇಶ್ವರಿ, ಮಾಲತಿ ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.