ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ನಿರ್ಣಯಿಸಲಾಯಿತು. ಕಲ್ಲಾಳ ರಸ್ತೆಯನ್ನು ಗ್ರಾಮ ಸಡಕ್ ಯೋಜನೆಗೆ ಸೇರ್ಪಡೆ ಮಾಡಿ ಸರಕಾರಕ್ಕೆ ಅನುಧಾನ ಕೋರಿ ಪತ್ರ ಬರೆಯಲು ತೀರ್ಮಾನಿಸಲಾಯಿತು.
ರಸ್ತೆ, ಕುಡಿಯುವ ನೀರು, ಬೀದಿ ದೀಪಗಳ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮದ ಪಂಚಾಯತ್ ರಸ್ತೆ ವಿಪರೀತ ಗಾಳಿ ಮಳೆಯಿಂದ ಹಾನಿಯಾದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಅನುದಾನ ಕೋರುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ವರದಿ ವಾಚಿಸಿದರು, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಗಿರಿಜಾ, ಯಮುನಾ ಗಿರೀಶ್, ಕೃಷ್ಣ ಬೆಳ್ಚಪಾಡ, ರಾಜೇಶ್ವರಿ, ಮಾಲತಿ ಉಪಸ್ಥಿತರಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.