ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ನಿರ್ಣಯಿಸಲಾಯಿತು. ಕಲ್ಲಾಳ ರಸ್ತೆಯನ್ನು ಗ್ರಾಮ ಸಡಕ್ ಯೋಜನೆಗೆ ಸೇರ್ಪಡೆ ಮಾಡಿ ಸರಕಾರಕ್ಕೆ ಅನುಧಾನ ಕೋರಿ ಪತ್ರ ಬರೆಯಲು ತೀರ್ಮಾನಿಸಲಾಯಿತು.
ರಸ್ತೆ, ಕುಡಿಯುವ ನೀರು, ಬೀದಿ ದೀಪಗಳ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮದ ಪಂಚಾಯತ್ ರಸ್ತೆ ವಿಪರೀತ ಗಾಳಿ ಮಳೆಯಿಂದ ಹಾನಿಯಾದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಅನುದಾನ ಕೋರುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ವರದಿ ವಾಚಿಸಿದರು, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಗಿರಿಜಾ, ಯಮುನಾ ಗಿರೀಶ್, ಕೃಷ್ಣ ಬೆಳ್ಚಪಾಡ, ರಾಜೇಶ್ವರಿ, ಮಾಲತಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…