Advertisement
ಸುದ್ದಿಗಳು

ಕೊಡವ ಕೌಟುಂಬಿಕ ಹಾಕಿ ಉತ್ಸವ : ಮುಕ್ಕಾಟಿರ ಕುಟುಂಬದಿಂದ ಲಾಂಛನ ಬಿಡುಗಡೆ

Share

ಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಹಬ್ಬದ ಆತಿಥ್ಯ ವಹಿಸಿರುವ ಬೆಳ್ಳೂರು ಹರಿಹರ ಮುಕ್ಕಾಟಿರ ಕುಟುಂಬ ಮುಂದಿನ ವರ್ಷ ನಡೆಯಲಿರುವ ಹಾಕಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದೆ.

ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್‍ಸಿಂಹ ಅವರು ಮುಕ್ಕಾಟಿರ ಹಾಕಿ ಹಬ್ಬಕ್ಕೆ ಅಗತ್ಯ ಅನುದಾನ ದೊರಕಿಸಿ ಕೊಡುವ ಭರವಸೆ ನೀಡಿದರು. ಮಾಜಿ ಸಚಿವ ಹೆಚ್.ವಿಶ್ವನಾಥ್ ಮಾತನಾಡಿ ವೀರಾಜಪೇಟೆ ಸಮೀಪದ ಬಾಳುಗೋಡುವಿನಲ್ಲಿರುವ ಕೊಡವ ಸಮಾಜ ಒಕ್ಕೂಟದ ಆವರಣದಲ್ಲಿ ಹಾಕಿ ಸ್ಟೇಡಿಯಂ ನಿರ್ಮಾಣಕ್ಕೆ ಹಿಂದಿನ ಬಜೆಟ್‍ನಲ್ಲಿ ಜೆಡಿಎಸ್ ಮುಖಂಡ ದೇವೇಗೌಡ ಅವರ ಆಶಯದಂತೆ 15 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕ್ಷೇತ್ರದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಈ ಅನುದಾನವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

 

ಮುಕ್ಕಾಟಿರ ಕುಟುಂಬ ಸಂಘದ ಅಧ್ಯಕ್ಷ ಮುಕ್ಕಾಟಿರ ಉತ್ತಪ್ಪ ಮಾತನಾಡಿ, ಆದಿಕಾಲದಿಂದ ಕೊಡಗಿನಲ್ಲಿ ನೆಲಸಿದ ಕೊಡವರು ತಮ್ಮದೇ ಆದ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದ್ದು ಪ್ರಕೃತಿಯನ್ನು ಪೂಜಿಸಿಕೊಂಡು ಬಂದಿದ್ದಾರೆ. ಜನಾಂಗವನ್ನು ಬೆಸೆಯುವ ಮತ್ತು ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಕೊಡವ ಹಾಕಿ ಹಬ್ಬ ಸಹಕಾರಿಯಾಗಿದೆ ಎಂದರು.
ಈ ಬಾರಿ ಬಾಳುಗೋಡುವಿನಲ್ಲಿ ಮುಂದಿನ ಏ.20 ರಿಂದ ಮೇ 20 ರವರೆಗೆ ಮುಕ್ಕಾಟಿರ ಕಪ್ ಹಾಕಿ ಪಂದ್ಯಾವಳಿ ನಡೆಯಲಿದ್ದು, ಇದು ಒಂದು ರೀತಿ 20- 20 ಪಂದ್ಯಾಟವಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣುಕಾರ್ಯಪ್ಪ, ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಅಂತರರಾಷ್ಟ್ರೀಯ ಹಾಕಿ ತೀರ್ಪುಗಾರ ಅಚ್ಚಕಾಳೇರ ಪಳಂಗಪ್ಪ, ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಕಾಳೇಂಗಡ ರಮೇಶ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಟುಂಬದ ಹಿರಿಯರಾದ ಮುಕ್ಕಾಟಿರ ಸೋಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮುಕ್ಕಾಟಿರ ಶಿವು ಮಾದಪ್ಪ, ಜಿ ಪಂ ಸದಸ್ಯರಾದ ಸರಿತಾ ಪೂಣಚ್ಚ ಹಾಗೂ ಬಾನಂಡ ಪ್ರಥ್ಯು, ಮುಕ್ಕಾಟಿರ ಕುಟುಂಬದ ಕಾರ್ಯಾಧ್ಯಕ್ಷ ಮುಕ್ಕಾಟಿರ ರೋಹಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

8 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

9 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

9 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

17 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago