Advertisement
ಸುದ್ದಿಗಳು

ಕೊಡವ ಕೌಟುಂಬಿಕ ಹಾಕಿ ಉತ್ಸವ : ಮುಕ್ಕಾಟಿರ ಕುಟುಂಬದಿಂದ ಲಾಂಛನ ಬಿಡುಗಡೆ

Share

ಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಹಬ್ಬದ ಆತಿಥ್ಯ ವಹಿಸಿರುವ ಬೆಳ್ಳೂರು ಹರಿಹರ ಮುಕ್ಕಾಟಿರ ಕುಟುಂಬ ಮುಂದಿನ ವರ್ಷ ನಡೆಯಲಿರುವ ಹಾಕಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದೆ.

Advertisement
Advertisement
Advertisement
Advertisement
Advertisement

ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್‍ಸಿಂಹ ಅವರು ಮುಕ್ಕಾಟಿರ ಹಾಕಿ ಹಬ್ಬಕ್ಕೆ ಅಗತ್ಯ ಅನುದಾನ ದೊರಕಿಸಿ ಕೊಡುವ ಭರವಸೆ ನೀಡಿದರು. ಮಾಜಿ ಸಚಿವ ಹೆಚ್.ವಿಶ್ವನಾಥ್ ಮಾತನಾಡಿ ವೀರಾಜಪೇಟೆ ಸಮೀಪದ ಬಾಳುಗೋಡುವಿನಲ್ಲಿರುವ ಕೊಡವ ಸಮಾಜ ಒಕ್ಕೂಟದ ಆವರಣದಲ್ಲಿ ಹಾಕಿ ಸ್ಟೇಡಿಯಂ ನಿರ್ಮಾಣಕ್ಕೆ ಹಿಂದಿನ ಬಜೆಟ್‍ನಲ್ಲಿ ಜೆಡಿಎಸ್ ಮುಖಂಡ ದೇವೇಗೌಡ ಅವರ ಆಶಯದಂತೆ 15 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕ್ಷೇತ್ರದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಈ ಅನುದಾನವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

Advertisement

 

Advertisement

ಮುಕ್ಕಾಟಿರ ಕುಟುಂಬ ಸಂಘದ ಅಧ್ಯಕ್ಷ ಮುಕ್ಕಾಟಿರ ಉತ್ತಪ್ಪ ಮಾತನಾಡಿ, ಆದಿಕಾಲದಿಂದ ಕೊಡಗಿನಲ್ಲಿ ನೆಲಸಿದ ಕೊಡವರು ತಮ್ಮದೇ ಆದ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದ್ದು ಪ್ರಕೃತಿಯನ್ನು ಪೂಜಿಸಿಕೊಂಡು ಬಂದಿದ್ದಾರೆ. ಜನಾಂಗವನ್ನು ಬೆಸೆಯುವ ಮತ್ತು ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಕೊಡವ ಹಾಕಿ ಹಬ್ಬ ಸಹಕಾರಿಯಾಗಿದೆ ಎಂದರು.
ಈ ಬಾರಿ ಬಾಳುಗೋಡುವಿನಲ್ಲಿ ಮುಂದಿನ ಏ.20 ರಿಂದ ಮೇ 20 ರವರೆಗೆ ಮುಕ್ಕಾಟಿರ ಕಪ್ ಹಾಕಿ ಪಂದ್ಯಾವಳಿ ನಡೆಯಲಿದ್ದು, ಇದು ಒಂದು ರೀತಿ 20- 20 ಪಂದ್ಯಾಟವಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣುಕಾರ್ಯಪ್ಪ, ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಅಂತರರಾಷ್ಟ್ರೀಯ ಹಾಕಿ ತೀರ್ಪುಗಾರ ಅಚ್ಚಕಾಳೇರ ಪಳಂಗಪ್ಪ, ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಕಾಳೇಂಗಡ ರಮೇಶ್ ಮಾತನಾಡಿದರು.

Advertisement

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಟುಂಬದ ಹಿರಿಯರಾದ ಮುಕ್ಕಾಟಿರ ಸೋಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮುಕ್ಕಾಟಿರ ಶಿವು ಮಾದಪ್ಪ, ಜಿ ಪಂ ಸದಸ್ಯರಾದ ಸರಿತಾ ಪೂಣಚ್ಚ ಹಾಗೂ ಬಾನಂಡ ಪ್ರಥ್ಯು, ಮುಕ್ಕಾಟಿರ ಕುಟುಂಬದ ಕಾರ್ಯಾಧ್ಯಕ್ಷ ಮುಕ್ಕಾಟಿರ ರೋಹಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

7 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

9 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

2 days ago