Advertisement
ಸುದ್ದಿಗಳು

ಕೊಡವ ಕೌಟುಂಬಿಕ ಹಾಕಿ ಉತ್ಸವ : ಮುಕ್ಕಾಟಿರ ಕುಟುಂಬದಿಂದ ಲಾಂಛನ ಬಿಡುಗಡೆ

Share

ಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಹಬ್ಬದ ಆತಿಥ್ಯ ವಹಿಸಿರುವ ಬೆಳ್ಳೂರು ಹರಿಹರ ಮುಕ್ಕಾಟಿರ ಕುಟುಂಬ ಮುಂದಿನ ವರ್ಷ ನಡೆಯಲಿರುವ ಹಾಕಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದೆ.

ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್‍ಸಿಂಹ ಅವರು ಮುಕ್ಕಾಟಿರ ಹಾಕಿ ಹಬ್ಬಕ್ಕೆ ಅಗತ್ಯ ಅನುದಾನ ದೊರಕಿಸಿ ಕೊಡುವ ಭರವಸೆ ನೀಡಿದರು. ಮಾಜಿ ಸಚಿವ ಹೆಚ್.ವಿಶ್ವನಾಥ್ ಮಾತನಾಡಿ ವೀರಾಜಪೇಟೆ ಸಮೀಪದ ಬಾಳುಗೋಡುವಿನಲ್ಲಿರುವ ಕೊಡವ ಸಮಾಜ ಒಕ್ಕೂಟದ ಆವರಣದಲ್ಲಿ ಹಾಕಿ ಸ್ಟೇಡಿಯಂ ನಿರ್ಮಾಣಕ್ಕೆ ಹಿಂದಿನ ಬಜೆಟ್‍ನಲ್ಲಿ ಜೆಡಿಎಸ್ ಮುಖಂಡ ದೇವೇಗೌಡ ಅವರ ಆಶಯದಂತೆ 15 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕ್ಷೇತ್ರದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಈ ಅನುದಾನವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

 

ಮುಕ್ಕಾಟಿರ ಕುಟುಂಬ ಸಂಘದ ಅಧ್ಯಕ್ಷ ಮುಕ್ಕಾಟಿರ ಉತ್ತಪ್ಪ ಮಾತನಾಡಿ, ಆದಿಕಾಲದಿಂದ ಕೊಡಗಿನಲ್ಲಿ ನೆಲಸಿದ ಕೊಡವರು ತಮ್ಮದೇ ಆದ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದ್ದು ಪ್ರಕೃತಿಯನ್ನು ಪೂಜಿಸಿಕೊಂಡು ಬಂದಿದ್ದಾರೆ. ಜನಾಂಗವನ್ನು ಬೆಸೆಯುವ ಮತ್ತು ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಕೊಡವ ಹಾಕಿ ಹಬ್ಬ ಸಹಕಾರಿಯಾಗಿದೆ ಎಂದರು.
ಈ ಬಾರಿ ಬಾಳುಗೋಡುವಿನಲ್ಲಿ ಮುಂದಿನ ಏ.20 ರಿಂದ ಮೇ 20 ರವರೆಗೆ ಮುಕ್ಕಾಟಿರ ಕಪ್ ಹಾಕಿ ಪಂದ್ಯಾವಳಿ ನಡೆಯಲಿದ್ದು, ಇದು ಒಂದು ರೀತಿ 20- 20 ಪಂದ್ಯಾಟವಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣುಕಾರ್ಯಪ್ಪ, ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಅಂತರರಾಷ್ಟ್ರೀಯ ಹಾಕಿ ತೀರ್ಪುಗಾರ ಅಚ್ಚಕಾಳೇರ ಪಳಂಗಪ್ಪ, ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಕಾಳೇಂಗಡ ರಮೇಶ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಟುಂಬದ ಹಿರಿಯರಾದ ಮುಕ್ಕಾಟಿರ ಸೋಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮುಕ್ಕಾಟಿರ ಶಿವು ಮಾದಪ್ಪ, ಜಿ ಪಂ ಸದಸ್ಯರಾದ ಸರಿತಾ ಪೂಣಚ್ಚ ಹಾಗೂ ಬಾನಂಡ ಪ್ರಥ್ಯು, ಮುಕ್ಕಾಟಿರ ಕುಟುಂಬದ ಕಾರ್ಯಾಧ್ಯಕ್ಷ ಮುಕ್ಕಾಟಿರ ರೋಹಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

42 minutes ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

2 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

2 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

11 hours ago

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ

ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…

11 hours ago