Advertisement
ಸುದ್ದಿಗಳು

ಕೊಡವ ಕೌಟುಂಬಿಕ ಹಾಕಿ ಉತ್ಸವ : ಮುಕ್ಕಾಟಿರ ಕುಟುಂಬದಿಂದ ಲಾಂಛನ ಬಿಡುಗಡೆ

Share

ಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಹಬ್ಬದ ಆತಿಥ್ಯ ವಹಿಸಿರುವ ಬೆಳ್ಳೂರು ಹರಿಹರ ಮುಕ್ಕಾಟಿರ ಕುಟುಂಬ ಮುಂದಿನ ವರ್ಷ ನಡೆಯಲಿರುವ ಹಾಕಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದೆ.

ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್‍ಸಿಂಹ ಅವರು ಮುಕ್ಕಾಟಿರ ಹಾಕಿ ಹಬ್ಬಕ್ಕೆ ಅಗತ್ಯ ಅನುದಾನ ದೊರಕಿಸಿ ಕೊಡುವ ಭರವಸೆ ನೀಡಿದರು. ಮಾಜಿ ಸಚಿವ ಹೆಚ್.ವಿಶ್ವನಾಥ್ ಮಾತನಾಡಿ ವೀರಾಜಪೇಟೆ ಸಮೀಪದ ಬಾಳುಗೋಡುವಿನಲ್ಲಿರುವ ಕೊಡವ ಸಮಾಜ ಒಕ್ಕೂಟದ ಆವರಣದಲ್ಲಿ ಹಾಕಿ ಸ್ಟೇಡಿಯಂ ನಿರ್ಮಾಣಕ್ಕೆ ಹಿಂದಿನ ಬಜೆಟ್‍ನಲ್ಲಿ ಜೆಡಿಎಸ್ ಮುಖಂಡ ದೇವೇಗೌಡ ಅವರ ಆಶಯದಂತೆ 15 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕ್ಷೇತ್ರದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಈ ಅನುದಾನವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

 

ಮುಕ್ಕಾಟಿರ ಕುಟುಂಬ ಸಂಘದ ಅಧ್ಯಕ್ಷ ಮುಕ್ಕಾಟಿರ ಉತ್ತಪ್ಪ ಮಾತನಾಡಿ, ಆದಿಕಾಲದಿಂದ ಕೊಡಗಿನಲ್ಲಿ ನೆಲಸಿದ ಕೊಡವರು ತಮ್ಮದೇ ಆದ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದ್ದು ಪ್ರಕೃತಿಯನ್ನು ಪೂಜಿಸಿಕೊಂಡು ಬಂದಿದ್ದಾರೆ. ಜನಾಂಗವನ್ನು ಬೆಸೆಯುವ ಮತ್ತು ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಕೊಡವ ಹಾಕಿ ಹಬ್ಬ ಸಹಕಾರಿಯಾಗಿದೆ ಎಂದರು.
ಈ ಬಾರಿ ಬಾಳುಗೋಡುವಿನಲ್ಲಿ ಮುಂದಿನ ಏ.20 ರಿಂದ ಮೇ 20 ರವರೆಗೆ ಮುಕ್ಕಾಟಿರ ಕಪ್ ಹಾಕಿ ಪಂದ್ಯಾವಳಿ ನಡೆಯಲಿದ್ದು, ಇದು ಒಂದು ರೀತಿ 20- 20 ಪಂದ್ಯಾಟವಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣುಕಾರ್ಯಪ್ಪ, ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಅಂತರರಾಷ್ಟ್ರೀಯ ಹಾಕಿ ತೀರ್ಪುಗಾರ ಅಚ್ಚಕಾಳೇರ ಪಳಂಗಪ್ಪ, ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಕಾಳೇಂಗಡ ರಮೇಶ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಟುಂಬದ ಹಿರಿಯರಾದ ಮುಕ್ಕಾಟಿರ ಸೋಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮುಕ್ಕಾಟಿರ ಶಿವು ಮಾದಪ್ಪ, ಜಿ ಪಂ ಸದಸ್ಯರಾದ ಸರಿತಾ ಪೂಣಚ್ಚ ಹಾಗೂ ಬಾನಂಡ ಪ್ರಥ್ಯು, ಮುಕ್ಕಾಟಿರ ಕುಟುಂಬದ ಕಾರ್ಯಾಧ್ಯಕ್ಷ ಮುಕ್ಕಾಟಿರ ರೋಹಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

6 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

11 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago