ಮಡಿಕೇರಿ : ಎರಡನೇ ಬಾರಿಗೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ಅವರು ಇಂದು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಸಂಸತ್ ಪ್ರವೇಶಿಸುವ ಮೂಲಕ ಗಮನ ಸೆಳೆದರು.
17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನಕ್ಕೆ ಕೊಡವ ಉಡುಪಾದ ಕುಪ್ಯಚಾಲೆ, ದಟ್ಟಿ, ಪೀಚೆಕತ್ತಿಯೊಂದಿಗೆ ಲೋಕಸಭೆಯಲ್ಲಿ ಕಾಣಿಸಿಕೊಂಡು ಕೊಡಗಿನ ವೀರಪರಂಪರೆಯನ್ನು ಸಾಕ್ಷೀಕರಿಸಿದರು. ಅತ್ಯಧಿಕ ಮತಗಳನ್ನು ನೀಡಿ ತಮ್ಮ ಗೆಲುವಿಗೆ ಕಾರಣವಾದ ಕೊಡಗಿನ ಬಗ್ಗೆ ಅಪಾರ ಅಭಿಮಾನವನ್ನು ವ್ಯಕ್ತಪಡಿಸಿರುವ ಪ್ರತಾಪ್ಸಿಂಹ, ಜಿಲ್ಲೆಯ ಜನರ ನಿರೀಕ್ಷೆಗಳನ್ನು ಹುಸಿ ಮಾಡುವುದಿಲ್ಲವೆಂದು ಈಗಾಗಲೇ ಭರವಸೆ ನೀಡಿದ್ದಾರೆ.
ಮತ್ತೊಂದೆಡೆ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮೈಸೂರು ಶೈಲಿಯ ಪಂಚೆ, ಶಲ್ಯ ಧರಿಸಿ ಸಂಸತ್ ಪ್ರವೇಶಿಸುವ ಮೂಲಕ ವಿಶಿಷ್ಟತೆ ಮೆರೆದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…