ಮಡಿಕೇರಿ : ಎರಡನೇ ಬಾರಿಗೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ಅವರು ಇಂದು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಸಂಸತ್ ಪ್ರವೇಶಿಸುವ ಮೂಲಕ ಗಮನ ಸೆಳೆದರು.
17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನಕ್ಕೆ ಕೊಡವ ಉಡುಪಾದ ಕುಪ್ಯಚಾಲೆ, ದಟ್ಟಿ, ಪೀಚೆಕತ್ತಿಯೊಂದಿಗೆ ಲೋಕಸಭೆಯಲ್ಲಿ ಕಾಣಿಸಿಕೊಂಡು ಕೊಡಗಿನ ವೀರಪರಂಪರೆಯನ್ನು ಸಾಕ್ಷೀಕರಿಸಿದರು. ಅತ್ಯಧಿಕ ಮತಗಳನ್ನು ನೀಡಿ ತಮ್ಮ ಗೆಲುವಿಗೆ ಕಾರಣವಾದ ಕೊಡಗಿನ ಬಗ್ಗೆ ಅಪಾರ ಅಭಿಮಾನವನ್ನು ವ್ಯಕ್ತಪಡಿಸಿರುವ ಪ್ರತಾಪ್ಸಿಂಹ, ಜಿಲ್ಲೆಯ ಜನರ ನಿರೀಕ್ಷೆಗಳನ್ನು ಹುಸಿ ಮಾಡುವುದಿಲ್ಲವೆಂದು ಈಗಾಗಲೇ ಭರವಸೆ ನೀಡಿದ್ದಾರೆ.
ಮತ್ತೊಂದೆಡೆ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮೈಸೂರು ಶೈಲಿಯ ಪಂಚೆ, ಶಲ್ಯ ಧರಿಸಿ ಸಂಸತ್ ಪ್ರವೇಶಿಸುವ ಮೂಲಕ ವಿಶಿಷ್ಟತೆ ಮೆರೆದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…
ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…