ಮಡಿಕೇರಿ : ಎರಡನೇ ಬಾರಿಗೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ಅವರು ಇಂದು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಸಂಸತ್ ಪ್ರವೇಶಿಸುವ ಮೂಲಕ ಗಮನ ಸೆಳೆದರು.
17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನಕ್ಕೆ ಕೊಡವ ಉಡುಪಾದ ಕುಪ್ಯಚಾಲೆ, ದಟ್ಟಿ, ಪೀಚೆಕತ್ತಿಯೊಂದಿಗೆ ಲೋಕಸಭೆಯಲ್ಲಿ ಕಾಣಿಸಿಕೊಂಡು ಕೊಡಗಿನ ವೀರಪರಂಪರೆಯನ್ನು ಸಾಕ್ಷೀಕರಿಸಿದರು. ಅತ್ಯಧಿಕ ಮತಗಳನ್ನು ನೀಡಿ ತಮ್ಮ ಗೆಲುವಿಗೆ ಕಾರಣವಾದ ಕೊಡಗಿನ ಬಗ್ಗೆ ಅಪಾರ ಅಭಿಮಾನವನ್ನು ವ್ಯಕ್ತಪಡಿಸಿರುವ ಪ್ರತಾಪ್ಸಿಂಹ, ಜಿಲ್ಲೆಯ ಜನರ ನಿರೀಕ್ಷೆಗಳನ್ನು ಹುಸಿ ಮಾಡುವುದಿಲ್ಲವೆಂದು ಈಗಾಗಲೇ ಭರವಸೆ ನೀಡಿದ್ದಾರೆ.
ಮತ್ತೊಂದೆಡೆ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮೈಸೂರು ಶೈಲಿಯ ಪಂಚೆ, ಶಲ್ಯ ಧರಿಸಿ ಸಂಸತ್ ಪ್ರವೇಶಿಸುವ ಮೂಲಕ ವಿಶಿಷ್ಟತೆ ಮೆರೆದರು.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…