ಮಡಿಕೇರಿ : ಎರಡನೇ ಬಾರಿಗೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ಅವರು ಇಂದು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಸಂಸತ್ ಪ್ರವೇಶಿಸುವ ಮೂಲಕ ಗಮನ ಸೆಳೆದರು.
17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನಕ್ಕೆ ಕೊಡವ ಉಡುಪಾದ ಕುಪ್ಯಚಾಲೆ, ದಟ್ಟಿ, ಪೀಚೆಕತ್ತಿಯೊಂದಿಗೆ ಲೋಕಸಭೆಯಲ್ಲಿ ಕಾಣಿಸಿಕೊಂಡು ಕೊಡಗಿನ ವೀರಪರಂಪರೆಯನ್ನು ಸಾಕ್ಷೀಕರಿಸಿದರು. ಅತ್ಯಧಿಕ ಮತಗಳನ್ನು ನೀಡಿ ತಮ್ಮ ಗೆಲುವಿಗೆ ಕಾರಣವಾದ ಕೊಡಗಿನ ಬಗ್ಗೆ ಅಪಾರ ಅಭಿಮಾನವನ್ನು ವ್ಯಕ್ತಪಡಿಸಿರುವ ಪ್ರತಾಪ್ಸಿಂಹ, ಜಿಲ್ಲೆಯ ಜನರ ನಿರೀಕ್ಷೆಗಳನ್ನು ಹುಸಿ ಮಾಡುವುದಿಲ್ಲವೆಂದು ಈಗಾಗಲೇ ಭರವಸೆ ನೀಡಿದ್ದಾರೆ.
ಮತ್ತೊಂದೆಡೆ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮೈಸೂರು ಶೈಲಿಯ ಪಂಚೆ, ಶಲ್ಯ ಧರಿಸಿ ಸಂಸತ್ ಪ್ರವೇಶಿಸುವ ಮೂಲಕ ವಿಶಿಷ್ಟತೆ ಮೆರೆದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…